ಮೈಸೂರು: ಬಳ್ಳಾರಿ ಬ್ಯಾನರ್ ಗಲಾಟೆ ರಾಜ್ಯದಲ್ಲಿ ಕೋಲಾಹಲ ಸೃಷ್ಟಿಸಿತು. ಇದರ ಬೆನ್ನಲ್ಲೇ ಮೈಸೂರಿನಲ್ಲಿ ಫ್ಲೆಕ್ಸ್ ಜಟಾಪಟಿ ಜೋರಾಗಿದೆ. ಕೆ.ಆರ್ ನಗರದ ಕೆಸ್ತೂರು ಕೊಪ್ಪಲಿನಲ್ಲಿ ಜೆಡಿಎಸ್ ನಾಯಕರ ಫ್ಲೆಕ್ಸ್ ತೆರವುಗೊಳಿಸಿದ ಆರೋಪ ಕೇಳಿ ಬಂದಿದೆ. ಜೆಡಿಎಸ್ ನಾಯಕರಾದ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಸಾರಾ ಮಹೇಶ್ ಫ್ಲೆಕ್ಸ್ಗಳನ್ನ ತೆರವುಗೊಳಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ ಎನ್ನುವ ಆರೋಪ ಕೂಡ ಇದೆ.
ಕೈ ಶಾಸಕರ ಊರಲ್ಲಿ ಜೆಡಿಎಸ್ ನಾಯಕ ಫ್ಲೆಕ್ಸ್ ತೆರವು
ಕಾಂಗ್ರೆಸ್ ಶಾಸಕ ರವಿಶಂಕರ್ ಹುಟ್ಟೂರಲ್ಲಿ ಕೈ ಕಾರ್ಯಕರ್ತರು ಜೆಡಿಎಸ್ ನಾಯಕರ ಬ್ಯಾನರ್ ತೆರವುಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ. ಜೆಡಿಎಸ್ ನಾಯಕಾರಾದ ಕೇಂದ್ರ ಸಚಿವ ಕುಮಾರಸ್ವಾಮಿ ಮಾಜಿ ಸಚಿವ ಸಾರಾ ಮಹೇಶ್ ಅವರ ಬ್ಯಾನರ್ ತೆಗದ ಕಾಂಗ್ರೆಸ್ ಕಾರ್ಯಕರ್ತರು ಧಮ್ಕಿ ಹಾಕಿದ್ದಾರೆ ಎನ್ನುವ ಆರೋಪವಿದೆ.
ಕಾಂಗ್ರೆಸ್ ಕಾರ್ಯಕರ್ತರಿಂದ ಧಮ್ಕಿ ಆರೋಪ
ಕೆ.ಆರ್ ನಗರದ ಕೆಸ್ತೂರು ಕೊಪ್ಪಲಿನಲ್ಲಿ ನಮ್ಮ ಕಾಂಗ್ರೆಸ್ ನಾಯಕರಾದ ಶಾಸಕ ರವಿ ಅಣ್ಣಾ ಹಾಗೂ ಸ್ವಾಮಿ ಗೌಡ್ರು ಫ್ಲೆಕ್ಸ್ ಮಾತ್ರ ಇರಬೇಕು. ಬೇರೆಯವರ ಫ್ಲೆಕ್ಸ್ ಅಥವಾ ಬ್ಯಾನರ್ ಹಾಕಿದ್ರೆ ಅಷ್ಟೇ ಎಂದು ಕಾಂಗ್ರೆಸ್ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ
ಫ್ಲೆಕ್ಸ್ ತೆರವುಗೊಳಿಸಲು ಬಂದ ಕಾಂಗ್ರೆಸ್ ಕಾರ್ಯರ್ತರನ್ನ ಜೆಡಿಎಸ್ ಕಾರ್ಯಕರ್ತರು ತಡೆಯಲು ಮುಂದಾಗಿದ್ದಾರೆ. ಈ ನಡುವೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಇದೇ ವೇಳೆ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ. ಈ ಕುರಿತು ಕೆ. ಆರ್ ನಗರದ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲು ದಾಖಲಾಗಿದೆ.
ಬಳ್ಳಾರಿ ಬ್ಯಾನರ್ ಗಲಾಟೆ ಬಳಿಕ ಮೈಸೂರಿನ ಫ್ಲೆಕ್ಸ್ ಕಿತ್ತಾಟ ಜೋರಾಗಿದ್ದು, ಪೊಲೀಸರು ಯಾವ ರೀತಿ ಕ್ರಮ ತೆಗೆದುಕೊಳ್ತಾರೆ ಅನ್ನೋದನ್ನ ಕಾದು ನೋಡಬೇಕಿದೆ.
ಕುಮಾರಸ್ವಾಮಿ ಫ್ಲೆಕ್ಸ್ ತೆರವು; ಕಾಂಗ್ರೆಸ್ ಕಾರ್ಯಕರ್ತರಿಂದ ಧಮ್ಕಿ, ಹಲ್ಲೆ?
