Ad image

ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನಿಂದ ಹಿಟ್‌ & ರನ್‌ – ಸವಾರ ಸಾವು

Team SanjeMugilu
1 Min Read
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.

ರೇವಣ್ಣ ಪುತ್ರ ಶಶಾಂಕ್‌ ಫಾರ್ಚೂನರ್ ಕಾರ್ ಬೈಕಿಗೆ ಡಿಕ್ಕಿ ಹೊಡೆದು ಸವಾರ ರಾಜೇಶ್ (23) ಸಾವನ್ನಪ್ಪಿದ್ದಾರೆ. ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಟೋಲ್‌ ನೂರು ಮೀಟರ್ ಬಳಿ ಕಾರು ಗುದ್ದಿದೆ.

ಕಾರಿನಿಂದ ಇಳಿದ ಬಳಿಕ ಶಶಾಂಕ್‌ ನಾನು ಯಾರು ಗೊತ್ತಾ? ಹೆಚ್‌ಎಂ ರೇವಣ್ಣ ಪುತ್ರ ಎಂದು ಅವಾಜ್‌ ಹಾಕಿದ್ದಾರೆ. ನಂತರ ಕಾರನ್ನು ಬದಿಯಲ್ಲಿ ನಿಲ್ಲಿಸುತ್ತೇನೆ ಎಂದು ಹೇಳಿ ಶಶಾಂಕ್‌ ಪರಾರಿಯಾಗಿದ್ದಾರೆ. ಕಾರಿನಲ್ಲಿ ರೇವಣ್ಣ ಕುಟುಂಬಸ್ಥರು ಇದ್ದ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಹಿಟ್‌ ಆಂಡ್‌ ರನ್‌ ವಿಚಾರ ದೊಡ್ಡದಾಗುತ್ತಿದ್ದಂತೆ ತಡರಾತ್ರಿ ಫಾರ್ಚೂನರ್ ಕಾರನ್ನು ಕುದೂರು ಪೊಲೀಸ್ ಠಾಣೆಗೆ ತರಲಾಗಿದೆ.

Share This Article